Skip to main content

“ಸರ್ವೇ ಜನಾಃ ಸುಖಿನೋ ಭವಂತು”

“ಸರ್ವೇ ಜನಾಃ ಸುಖಿನೋ ಭವಂತು” ಜಗತ್ತಿನಲ್ಲಿ ಎಲ್ಲರೂ ಸುಖವಾಗಿರಲಿ.

”ಲೋಕಾಃ ಸಮಸ್ತಾಃ ಸುಖಿನೋ ಭವಂತು”ಎಲ್ಲ ಲೋಕಗಳೂ ಸುಖವಾಗಿರಲಿ”ಎಂದು ಬಯಸುವ ಭವ್ಯ ಸಂಸ್ಕೃತಿ ನಮ್ಮದು.

ಜಗತ್ತಿನಲ್ಲಿ ಸದಾ ಶಾಂತಿಯನ್ನು ಬಯಸಿದವರು ನಾವು.ತೀರ ಅನಿವಾರ್ಯವಾದಾಗ ಶಸ್ತ್ರವನ್ನು ಹಿಡಿದಿದ್ದೇವೆ.”ದಂಡಂ ದಶಗುಣಂ” ಎಂದು ವೈರಿಗಳ ಅಟ್ಟಹಾಸವನ್ನು ನಿಯಂತ್ರಿಸಿದ್ದೇವೆ.

ಶಾಂತಿ ಹಾಗೂ ಅಹಿಂಸೆ ನಮ್ಮ ಪರಮಧರ್ಮ.”ಅಹಿಂಸಾ ಪರಮೋ ಧರ್ಮಃ” ಎಂದು ಸಾರಿದವರು ನಾವು.ಇದಕ್ಕೆ ಮೂಲಪ್ರೇರಣೆ ನಮ್ಮ ವೇದ-ಶಾಸ್ತ್ರ-ಪುರಾಣ ಮುಂತಾದ ಧರ್ಮಗ್ರಂಥಗಳಲ್ಲಿರುವ ಶಾಂತಿ ಹಾಗೂ ಅಹಿಂಸಾ ತತ್ವಗಳು.ಶಾಂತಿಮಂತ್ರಗಳು ಕೇವಲ ನಮಗಷ್ಟೇ ಅಲ್ಲ,ಇಡೀ ಪ್ರಪಂಚ ಶಾಂತವಾಗಿರಲೆಂದು ಆಶಿಸುತ್ತವೆ.

ಕೇವಲ ಮನುಷ್ಯನಷ್ಟೇ ಶಾಂತವಾಗಿದ್ದರೆ ಸಾಲದು.ಪರಮಾತ್ಮ,ಪ್ರಕೃತಿ,ವನೌಷಧಿ ಹೀಗೆ ಎಲ್ಲವೂ ಸದಾ ಶಾಂತವಾಗಿರಲೆಂದು ಶಾಂತಿಮಂತ್ರಗಳು ಬಯಸುತ್ತವೆ. ಅಂತಹ ಶಾಂತಿಮಂತ್ರಗಳ ಕಿರು ಪರಿಚಯವನ್ನು ಮಾಡಿಕೊಳ್ಳೋಣ..

ಓಂ ನಮೋ ಬ್ರಹ್ಮಣೇ ನಮೋ ಅಸ್ತ್ವಗ್ನಯೇ ನಮಃ ಪೃಥಿವ್ಯೈ ನಮ ಓಷಧೀಭ್ಯಃ | ನಮೋ ವಾಚೇ ನಮೋ ವಾಚಸ್ಪತಯೇ ನಮೋ ವಿಷ್ಣವೇ ಬೃಹತೇ ಕರೋಮಿ ||

ಓಂ ಶಾಂತಿಃ ಶಾಂತಿಃ ಶಾಂತಿಃ ಬ್ರಹ್ಮನಿಗೆ ನಮಸ್ಕಾರ,ಅಗ್ನಿಗೆ ನಮಸ್ಕಾರ,ಸಸ್ಯಗಳಿಗೆ ನಮಸ್ಕಾರ,ಮಾತಿಗೆ ನಮಸ್ಕಾರ,ಮಾತಿನ ಒಡೆಯನಿಗೆ ನಮಸ್ಕಾರ,ಸರ್ವಾಂತರ್ಯಾಮಿ ಹಾಗೂ ಸಮರ್ಥನಾದ ವಿಷ್ಣುವಿಗೆ ನಮಸ್ಕಾರ.

ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸಹನಾವವತು | ಸಹ ನೌ ಭುನಕ್ತು | ಸಹ ವೀರ್ಯಂ ಕರವಾವಹೈ | ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ | ಓಂ ಶಾಂತಿಃ ಶಾಂತಿಃ ಶಾಂತಿಃ |

ಆ ಪರಮಾತ್ಮ ನಮ್ಮನ್ನು ಜೊತೆಯಾಗಿ ರಕ್ಷಿಸಲಿ,ಜೊತೆಯಾಗಿ ಆಹಾರ ಸೇವಿಸುವಂತೇ ಮಾಡಲಿ,ಜೊತೆಯಾಗಿ ಧೀರತನದ ಕಾರ್ಯವನ್ನು ಮಾಡುತ್ತೇವೆ.ನಮ್ಮ ಅಧ್ಯಯನ ತೇಜಸ್ಸಿನಿಂದ ಕೂಡಿರಲಿ,ನಾವು ಎಂದಿಗೂ ದ್ವೇಷಿಸದಂತಾಗದಿರಲಿ..

ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ದ್ಯೌಃ ಶಾಂತಿರಂತರಿಕ್ಷಂ ಶಾಂತಿಃ ಪೃಥಿವೀ ಶಾಂತಿರಾಪಃ ಶಾಂತಿರೋಷಧಯಃ ಶಾಂತಿಃ | ವನಸ್ಪತಯಃ ಶಾಂತಿರ್ವಿಶ್ವೇದೇವಾಃ ಶಾಂತಿರ್ಬ್ರಹ್ಮಶಾಂತಿಃ ಸರ್ವಂ ಶಾಂತಿಃ ಶಾಂತಿರೇವ ಶಾಂತಿಃ ಸಾ ಮಾ ಶಾಂತಿರೇಧಿ ||

ಓಂ ಶಾಂತಿಃ ಶಾಂತಿಃ ಶಾಂತಿಃ ಸ್ವರ್ಗದಲ್ಲಿ ಶಾಂತಿಯಿರಲಿ , ಆಕಾಶದಲ್ಲಿ ಶಾಂತಿಯಿರಲಿ , ಭೂಮಿಯಲ್ಲಿ ಶಾಂತಿಯಿರಲಿ , ನೀರಿನಲ್ಲಿ ಶಾಂತಿಯಿರಲಿ , ಔಷಧೀಯ ವೃಕ್ಷಗಳಲ್ಲಿ ಶಾಂತಿಯಿರಲಿ , ಔಷಧೀಯ ಸಸ್ಯಗಳಲ್ಲಿ ಶಾಂತಿಯಿರಲಿ , ವಿಶ್ವದಲ್ಲಿರುವ ಎಲ್ಲ ದೇವರುಗಳಲ್ಲೂ ಶಾಂತಿಯಿರಲಿ , ಬ್ರಹ್ಮನಲ್ಲಿ ಶಾಂತಿಯಿರಲಿ , ಸರ್ವತ್ರ ಶಾಂತಿಯಿರಲಿ , ಶಾಂತಿಯಲ್ಲೇ ಶಾಂತಿಯಿರಲಿ , ನನ್ನಲ್ಲಿರುವ ಶಾಂತಿ ಇನ್ನೂ ವೃದ್ಧಿಯಾಗಲಿ..

ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸರ್ವೇಷಾಂ ಸ್ವಸ್ತಿರ್ಭವತು ಸರ್ವೇಷಾಂ ಶಾಂತಿರ್ಭವತು | ಸರ್ವೇಷಾಂ ಪೂರ್ಣಂ ಭವತು ಸರ್ವೇಷಾಂ ಮಂಗಲಂ ಭವತು ||

ಓಂ ಶಾಂತಿಃ ಶಾಂತಿಃ ಶಾಂತಿಃ ಪ್ರಪಂಚದಲ್ಲಿರುವ ಎಲ್ಲರೂ ಒಳ್ಳೆಯವರಾಗಲಿ , ಎಲ್ಲರೂ ಶಾಂತಿಯಿಂದಿರಲಿ , ಎಲ್ಲರ ಮನೋಕಾಮನೆಗಳೂ ನೆರವೇರಲಿ , ಎಲ್ಲರಿಗೂ ಒಳಿತಾಗಲಿ..

ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ | ಸರ್ವೇ ಭದ್ರಾಣಿ ಪಶ್ಯಂತು ಮಾ ಕಶ್ಚಿತ್ ದುಃಖಭಾಗ್-ಭವೇತ್ ||

ಎಲ್ಲರೂ ಸುಖವಾಗಿರಲಿ , ಎಲ್ಲರೂ ಚಿಂತೆಗಳಿಂದ ವಿಮುಕ್ತರಾಗಿರಲಿ , ಎಲ್ಲರೂ ಒಳ್ಳೆಯ ವಿಷಯಗಳನ್ನೇ ನೋಡುವಂತಾಗಲಿ , ಯಾರಿಗೂ ದುಃಖ ಬಾರದಿರಲಿ. ಓಂ ಶಾಂತಿಃ ಶಾಂತಿಃ ಶಾಂತಿಃ

ಲೋಕಾಃ ಸಮಸ್ತಾಃ ಸುಖಿನೋ ಭವಂತು..

Comments

Post a Comment

Popular posts from this blog

ದಶರಥ

ಇಕ್ಷ್ವಾಕುವಂಶದ ಪ್ರಸಿದ್ಧ ರಾಜ ದಶರಥ.ವಾಲ್ಮೀಕಿರಾಮಾಯಣದ ನಾಯಕ,ಮರ್ಯಾದಾಪುರುಷೋತ್ತಮ,ಪ್ರಾತಃಸ್ಮರಣೀಯ ಶ್ರೀರಾಮಚಂದ್ರನ ತಂದೆ.ದಶರಥನ ಹೆಸರಿನಿಂದಲೇ ರಾಮ "ದಾಶರಥಿರಾಮ" ಎಂದು ವಿಖ್ಯಾತನಾದ.ಅಜಮಹಾರಾಜನ ಪುತ್ರ ದಶರಥ,ಆತನ ತಾಯಿಯ ಹೆಸರು ಇಂದುಮತಿ. ಧೀರತೆಗೆ,ಧರ್ಮನಿಷ್ಟೆಗೆ ಹೆಸರಾಗಿದ್ದ ಅಯೋಧ್ಯೆಯ ರಾಜ ದಶರಥ.ಆದರೆ ಅತಿಯಾದ ವಿಷಯಾಸಕ್ತಿಗಳಿಂದ ಬದುಕನ್ನೇ ಅನರ್ಥ ಮಾಡಿಕೊಂಡ.ಭಾರ್ಗವರಿಂದ ಕಾಡಿ-ಬೇಡಿ ಕಲಿತಿದ್ದ ಶಬ್ದವೇಧಿ ವಿದ್ಯೆಯನ್ನು ಪರೀಕ್ಷಿಸಲು ಹೋಗಿ,ಅನ್ಯಾಯವಾಗಿ ಶ್ರವಣಕುಮಾರನನ್ನು ಕೊಂದು ಆತನ ಪಾಲಕರಿಂದ ಶಾಪಗ್ರಸ್ತನಾಗಿ ಪುತ್ರಶೋಕದಿಂದ ಪರಿತಪಿಸುತ್ತಾ ಇಹಲೋಕ ತ್ಯಜಿಸಿದ.ಲೋಕದ ಒಡೆಯನ ತಂದೆಯಾದರೂ ದುಃಖ ತಪ್ಪಲಿಲ್ಲ,ಮನೋನಿಗ್ರಹಿಯಾದರೂ  ಕಾಮನೆಗಳನ್ನು ಬಿಡಲಿಲ್ಲ.ರಾಮಾಯಣದ ದುರಂತನಾಯಕ ದಶರಥನೆಂದರೆ ಅತಿಶಯೋಕ್ತಿಯಾಗಲಾರದು. ಕೌಸಲ್ಯೆ,ಸುಮಿತ್ರೆ,ಕೈಕೇಯಿ ದಶರಥನ ಪ್ರಸಿದ್ಧ ಪತ್ನಿಯರು.ಆದರೆ ವಾಸ್ತವದಲ್ಲಿ ದಶರಥನಿಗೆ ಹಲವು ಪತ್ನಿಯರಿದ್ದರೆಂದು ಮೂಲರಾಮಾಯಣದ ಸಂಭಾಷಣೆಗಳಿಂದ ತಿಳಿಯಬಹುದು."ರಾಜಾನೋ ಬಹುವಲ್ಲಭಾಃ" ಎಂಬುದು ಸರಿ,ಆದರೆ ಅನೇಕ ಪತ್ನಿಯರಿದ್ದರೆ ರಾಜನ ಪರಿಸ್ಥಿತಿ ಎಷ್ಟು ದಯನೀಯವಾಗಿರಬಹುದೆಂಬುದಕ್ಕೆ ದಶರಥ ಮಹಾರಾಜ ಸ್ಪಷ್ಟ ಉದಾಹರಣೆ. ವಾಲ್ಮೀಕಿರಾಮಾಯಣದ ಒಂದು ಪ್ರಸಂಗ.ಅನುಸೂಯೆಯೊಂದಿಗೆ ಮಾತಾಡುತ್ತ ಸೀತೆ,"ರಾಮ ತನ್ನ ಮಾತೆ ಕೌಸಲ್ಯೆಗೆ ಎಷ್ಟು ಗೌರವವನ್ನು ನೀಡ...

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ

ದಟ್ಟವಾದ ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವ...