Skip to main content

ಮುಂಜಾಗ್ರತೆಯಿದ್ದಿದ್ದರೆ ಬರ ಕಡಿಮೆ ಮಾಡಬಹುದಿತ್ತು

ಗಡ್ಡಕ್ಕೆ ಬೆಂಕಿ ಬಿದ್ದಮೇಲೆ ಬಾವಿ ತೋಡುವ ನಾಟಕವೇಕೆ?

ಮುಂಜಾಗ್ರತೆಯಿದ್ದಿದ್ದರೆ ಬರ ಕಡಿಮೆ ಮಾಡಬಹುದಿತ್ತು



ಇತ್ತ ರಾಜ್ಯ ಸರ್ಕಾರ ಬರದ ಸಮೀಕ್ಷೆ(?)ಯನ್ನು ಮುಗಿಸಿ ಕೂತಿದೆ, ಅತ್ತ ಕೇಂದ್ರ ಸರ್ಕಾರ ದುಡಿಯುವ ವರ್ಗದ ಪಿಎಫ್ ಹಣಕ್ಕೆ ಬೇಡದ ಕಾನೂನು ರೂಪಿಸಿ ದುಡಿಯುವ ವರ್ಗದ ಕೆಂಗಣ್ಣಿಗೆ ಗುರಿಯಾಗಿದೆ.

ಸಾಲು ಸಾಲಾಗಿ ಸಾವಿರಾರು ರೈತರು ಬರಗಾಲ, ಬೆಳೆ ವೈಫಲ್ಯ, ಸಾಲಭಾದೆಗಳಿಂದ ಚೇತರಿಸಿಕೊಳ್ಳಲಾಗದೆ ಆತ್ಮಹತ್ಯೆ ದಾರಿ ಹಿಡಿದಾಗ ತಿರುಗಿಯೂ ನೋಡದ ಸರ್ಕಾರ ರಾಜಕಾರಣಕ್ಕಾಗಿ ಬರದ ಪ್ರವಾಸ ಮಾಡಿ ಹೆಮ್ಮೆಯಿಂದ ಬೀಗುತ್ತಿದೆ. ರಾಜ್ಯ ಸರ್ಕಾರವು ಬರಗಾಲ ಮುಗಿಯುವ ವೇಳೆಗೆ ಮಳೆ ಬರುವ ಮುನ್ನ ಬರದ ಸಮೀಕ್ಷೆ ನೆಡೆಸಲು ಪ್ರವಾಸ ಕೈಗೊಂಡು ಅಲ್ಲಲ್ಲಿ ವಿರೋಧ ಮತ್ತು ಹಾರ-ತುರಾಯಿಗಳ ಜೈಕಾರವನ್ನು ಹಾಕಿಸಿಕೊಂಡು ಬೇಸಿಗೆಯ ಉರಿಬಿಸಿಲು ತಾಳಲಾಗದೆ ವಿಧಾನಸೌಧದ ಹವಾ ನಿಯಂತ್ರಣ ಕೊಠಡಿಗೆ ತಲುಪಿದೆ.

ಇತ್ತೀಚೆಗೆ ಯಡ್ಯೂರಪ್ಪ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ತಕ್ಷಣ ತಾವು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಬರದ ಪರಿಶೀಲನೆ ಮಾಡಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯ ಮಾಡುತ್ತೇನೆ ಎಂದರು. ಹೀಗೆ ಹೇಳಿದ ಕೂಡಲೆ ನಿದ್ದೆಯಿಂದೆದ್ದ ಮಗು ಚಡಪಡಿಸುವಂತೆ ಸರ್ಕಾರವು ಚಡಪಡಿಸುತ್ತಾ ಅವರಿಗಿಂತ ಮೊದಲು ಬರದ ಸಮೀಕ್ಷೆ ಮಾಡಬೇಕೆಂದು ಉತ್ತರ ಕರ್ನಾಟಕದ ಜಿಲ್ಲೆಗಳ ಕದತಟ್ಟಿ ಬರಲು ಮಾನ್ಯ ಮುಖ್ಯಮಂತ್ರಿಗಳೆ ಅಧಿಕಾರಿಗಳ ವರ್ಗವನ್ನು ಕಟ್ಟಿಕೊಂಡು ಬೆಂಗಳೂರಿನಿಂದ ಹೊರಟೆ ಬಿಟ್ಟರು.

ಯಡ್ಯೂರಪ್ಪ ಬರದ ಸಮೀಕ್ಷೆ ಎಂದು ಹೇಳುವ ತನಕ ಸರ್ಕಾರಕ್ಕೆ ಅದರ ಅರಿವಿಲ್ಲದೆ ಕೂತೀತ್ತೆ? ರಾಜ್ಯ ಸರ್ಕಾರವು ಕಳೆದ ತಿಂಗಳ ಬಜೆಟ್ ಅಧಿವೇಶನದ ಮುನ್ನ ಸಮೀಕ್ಷೆ ಮಾಡಿದ್ದರೆ ಹಲವು ಯೋಜನೆಗಳನ್ನು ಜಾರಿ ಮಾಡಿ, ಒಂದಷ್ಟು ಹಣವನ್ನಾದರೂ ನೀಡಬಹುದಿತ್ತು. ಆದರೆ ಅದನ್ನು ಮಾಡಲಿಲ್ಲ. ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ನೀಡಿದ ಸಾವಿರಾರು ಕೋಟಿ ರೂಪಾಯಿಯು ಏನಾಯಿತೆಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಗಡೆ ಕೇಳಿದಾಗಲೆ ತಿಳಿದಿದ್ದು ಕೇಂದ್ರ ಕೊಟ್ಟ ಹಣವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಿಲ್ಲವಲ್ಲವೆಂದು.

ಯಡ್ಡ್ಯೂರಪ್ಪನವರ ಆದೇಶದ ಮೇರೆಗೆ ಬಿಜೆಪಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ತಮ್ಮ ಒಂದು ತಿಂಗಳ ಸಂಬಳವನ್ನು ಬರ ಪರಿಹಾರಕ್ಕೆ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳವೂ ಇದೇ ನಿಲುವನ್ನು ತೆಗೆದುಕೊಳ್ಳಲಿ. ಸರ್ಕಾರಕ್ಕೆ ಬರ ಪರಿಹಾರಕ್ಕೆ ಹಣದ ಕೊರತೆ ಇದ್ದರೆ ಅದು ಅನುಕೂಲವಾಗುತ್ತದೆ.

ಮುಖ್ಯಮಂತ್ರಿಗಳು ಬರುವ ರಸ್ತೆಯಲ್ಲಿ ಧೂಳಿರಬಾರದೆಂದು ಇಲಾಖೆ ರಸ್ತೆಗೆ ಸುರಿಯುವ ನೀರು ಒಂದು ಗ್ರಾಮಕ್ಕೆ ಕುಡಿಯುವ ನೀರಾಗುತ್ತದೆ. ಇದರ ಬಗ್ಗೆ ಮುಖ್ಯಮಂತ್ರಿಗಳು ಶಿಷ್ಟಾಚಾರದಿಂದ ಪೋಲಾಗುವ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಪ್ರಯತ್ನ ಮಾಡುವುದೇ ಇಲ್ಲವೇ?

ನೀರಿಗಾಗಿ ಅರ್ಧವರ್ಷ ಕಳೆದ ನೆರಗುಂದ-ನವಲಗುಂದದ ಕಳಸಾ ಬಂಡೂರಿ ಹೋರಾಟಕ್ಕೆ ಸೂಕ್ತ ಪರಿಹಾರ ನೀಡಲು ಈ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೇನಾಗಿದೆ ಎಂದು ತಿಳಿಯುತ್ತಿಲ್ಲ. ಅಂದು ಅದಕ್ಕೆ ಪರಿಹಾರ ಸಿಕ್ಕಿದ್ದರೆ ಇವತ್ತು ಉತ್ತರ ಕರ್ನಾಟಕದ ನೀರಿನ ಸಮಸ್ಯೆಗೆ ಒಂದಷ್ಟು ಮುಕ್ತಿ ಸಿಗುತ್ತಿತ್ತೇನೋ? ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿಲ್ಲ. ಕೇವಲ ಕಳಸಾ ಬಂಡೂರಿಯಲ್ಲ, ಕೋಲಾರದ ನೀರಿನ ಸಮಸ್ಯೆಗೂ ಪರಿಹಾರವಿಲ್ಲ.

ಯಾವುದೇ ಸಮಸ್ಯೆಗಳು, ಹೋರಾಟಗಳಿಗೂ ತಲೆ ಕೆಡಿಸಿಕೊಳ್ಳದೆ ನೆಮ್ಮದಿಯಿಂದಿರುವ ಈ ಸರ್ಕಾರಕ್ಕೆ ಏನಾಗಿದೆ ಎಂಬುದು ಮಾತ್ರ ನಿಗೂಢ. ಸರ್ಕಾರ ಚೇತರಿಸಿಕೊಳ್ಳಲಿ ಎಂಬುದಷ್ಟೆ ನಾಡಿನ ಜನರ ಒಕ್ಕೊರಲಿನ ಅಭಿಪ್ರಾಯ.



ರಾಜ್ಯ ಸರ್ಕಾರ ಈಗ ಬರದ ಸಮೀಕ್ಷೆ ಮಾಡುವ ಬದಲು ಹಿಂದಿನ ಮಳೆಗಾಲದಲ್ಲೇ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಿದ್ದರೆ, ಇವತ್ತು ಇಷ್ಟು ಭೀಕರ ಬರಗಾಲವನ್ನು ನೋಡುವ ಪರಿಸ್ಥಿತಿ ಇರುತ್ತಿರಲಿಲ್ಲ. ಕೆರೆಗಳು ಮಾತ್ರ ಬರಿದಾಗಿಲ್ಲ. ಇಂದು ಅಣೆಕಟ್ಟುಗಳಲ್ಲಿ ನೆಲಕಾಣುವ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ಪ್ರಕೃತಿಯ ನಿಯಂತ್ರಣ ಸರ್ಕಾರದ ಕೈಯಲಿಲ್ಲ ಎನ್ನುವ ಅರಿವಿದೆ. ಆದರೆ, ಪರ್ಯಾಯ ಮಾರ್ಗವನ್ನು, ನಾಶವಾಗುತ್ತಿರುವ ಬೆಳೆಗಳ ಉಳಿವಿಗೆ ಪ್ರಯತ್ನವನ್ನು ಸರಿಯಾದ ಸಮಯದಲ್ಲಿಯಾವ ಸರ್ಕಾರಗಳು ಮಾಡಿಲ್ಲ. ಕೇಂದ್ರ ಸರ್ಕಾರವು ನೀರಿನ ರೈಲನ್ನು ಜಾರಿಗೆ ತಂದಿದೆ. ಬರದ ಜಾಗಕ್ಕೆ ನೀರನ್ನು ಆ ರೈಲು ಕೊಂಡೊಯ್ಯುತ್ತದೆ. ಅಂತಹ ಮಹತ್ತರವಾದ ಯೋಜನೆಯನ್ನು ರಾಜ್ಯ ಸರ್ಕಾರ ಮಾಡಬಹುದಿತ್ತು. ನೀರಿನ ಟ್ಯಾಂಕರ್‌ಗಳಲ್ಲಿ ನೀರನ್ನು ತುಂಬಿಕೊಂಡು ಬರದ ಪ್ರದೇಶಗಳಿಗೆ ತಲುಪಿಸಿ ಜನ ಮತ್ತು ಜಾನುವಾರುಗಳಿಗೆ ನೀರನ್ನು ಒದಗಿಸಬಹುದಿತ್ತು.

Comments

Popular posts from this blog

“ಸರ್ವೇ ಜನಾಃ ಸುಖಿನೋ ಭವಂತು”

“ಸರ್ವೇ ಜನಾಃ ಸುಖಿನೋ ಭವಂತು” ಜಗತ್ತಿನಲ್ಲಿ ಎಲ್ಲರೂ ಸುಖವಾಗಿರಲಿ. ”ಲೋಕಾಃ ಸಮಸ್ತಾಃ ಸುಖಿನೋ ಭವಂತು”ಎಲ್ಲ ಲೋಕಗಳೂ ಸುಖವಾಗಿರಲಿ”ಎಂದು ಬಯಸುವ ಭವ್ಯ ಸಂಸ್ಕೃತಿ ನಮ್ಮದು. ಜಗತ್ತಿನಲ್ಲಿ ಸದಾ ಶಾಂತಿಯನ್ನು ಬಯಸಿದವರು ನಾವು.ತೀರ ಅನಿವಾರ್ಯವಾದಾಗ ಶಸ್ತ್ರವನ್ನು ಹಿಡಿದಿದ್ದೇವೆ.”ದಂಡಂ ದಶಗುಣಂ” ಎಂದು ವೈರಿಗಳ ಅಟ್ಟಹಾಸವನ್ನು ನಿಯಂತ್ರಿಸಿದ್ದೇವೆ. ಶಾಂತಿ ಹಾಗೂ ಅಹಿಂಸೆ ನಮ್ಮ ಪರಮಧರ್ಮ.”ಅಹಿಂಸಾ ಪರಮೋ ಧರ್ಮಃ” ಎಂದು ಸಾರಿದವರು ನಾವು.ಇದಕ್ಕೆ ಮೂಲಪ್ರೇರಣೆ ನಮ್ಮ ವೇದ-ಶಾಸ್ತ್ರ-ಪುರಾಣ ಮುಂತಾದ ಧರ್ಮಗ್ರಂಥಗಳಲ್ಲಿರುವ ಶಾಂತಿ ಹಾಗೂ ಅಹಿಂಸಾ ತತ್ವಗಳು.ಶಾಂತಿಮಂತ್ರಗಳು ಕೇವಲ ನಮಗಷ್ಟೇ ಅಲ್ಲ,ಇಡೀ ಪ್ರಪಂಚ ಶಾಂತವಾಗಿರಲೆಂದು ಆಶಿಸುತ್ತವೆ. ಕೇವಲ ಮನುಷ್ಯನಷ್ಟೇ ಶಾಂತವಾಗಿದ್ದರೆ ಸಾಲದು.ಪರಮಾತ್ಮ,ಪ್ರಕೃತಿ,ವನೌಷಧಿ ಹೀಗೆ ಎಲ್ಲವೂ ಸದಾ ಶಾಂತವಾಗಿರಲೆಂದು ಶಾಂತಿಮಂತ್ರಗಳು ಬಯಸುತ್ತವೆ. ಅಂತಹ ಶಾಂತಿಮಂತ್ರಗಳ ಕಿರು ಪರಿಚಯವನ್ನು ಮಾಡಿಕೊಳ್ಳೋಣ.. ಓಂ ನಮೋ ಬ್ರಹ್ಮಣೇ ನಮೋ ಅಸ್ತ್ವಗ್ನಯೇ ನಮಃ ಪೃಥಿವ್ಯೈ ನಮ ಓಷಧೀಭ್ಯಃ | ನಮೋ ವಾಚೇ ನಮೋ ವಾಚಸ್ಪತಯೇ ನಮೋ ವಿಷ್ಣವೇ ಬೃಹತೇ ಕರೋಮಿ || ಓಂ ಶಾಂತಿಃ ಶಾಂತಿಃ ಶಾಂತಿಃ ಬ್ರಹ್ಮನಿಗೆ ನಮಸ್ಕಾರ,ಅಗ್ನಿಗೆ ನಮಸ್ಕಾರ,ಸಸ್ಯಗಳಿಗೆ ನಮಸ್ಕಾರ,ಮಾತಿಗೆ ನಮಸ್ಕಾರ,ಮಾತಿನ ಒಡೆಯನಿಗೆ ನಮಸ್ಕಾರ,ಸರ್ವಾಂತರ್ಯಾಮಿ ಹಾಗೂ ಸಮರ್ಥನಾದ ವಿಷ್ಣುವಿಗೆ ನಮಸ್ಕಾರ. ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸಹನಾವವತ...

ದಶರಥ

ಇಕ್ಷ್ವಾಕುವಂಶದ ಪ್ರಸಿದ್ಧ ರಾಜ ದಶರಥ.ವಾಲ್ಮೀಕಿರಾಮಾಯಣದ ನಾಯಕ,ಮರ್ಯಾದಾಪುರುಷೋತ್ತಮ,ಪ್ರಾತಃಸ್ಮರಣೀಯ ಶ್ರೀರಾಮಚಂದ್ರನ ತಂದೆ.ದಶರಥನ ಹೆಸರಿನಿಂದಲೇ ರಾಮ "ದಾಶರಥಿರಾಮ" ಎಂದು ವಿಖ್ಯಾತನಾದ.ಅಜಮಹಾರಾಜನ ಪುತ್ರ ದಶರಥ,ಆತನ ತಾಯಿಯ ಹೆಸರು ಇಂದುಮತಿ. ಧೀರತೆಗೆ,ಧರ್ಮನಿಷ್ಟೆಗೆ ಹೆಸರಾಗಿದ್ದ ಅಯೋಧ್ಯೆಯ ರಾಜ ದಶರಥ.ಆದರೆ ಅತಿಯಾದ ವಿಷಯಾಸಕ್ತಿಗಳಿಂದ ಬದುಕನ್ನೇ ಅನರ್ಥ ಮಾಡಿಕೊಂಡ.ಭಾರ್ಗವರಿಂದ ಕಾಡಿ-ಬೇಡಿ ಕಲಿತಿದ್ದ ಶಬ್ದವೇಧಿ ವಿದ್ಯೆಯನ್ನು ಪರೀಕ್ಷಿಸಲು ಹೋಗಿ,ಅನ್ಯಾಯವಾಗಿ ಶ್ರವಣಕುಮಾರನನ್ನು ಕೊಂದು ಆತನ ಪಾಲಕರಿಂದ ಶಾಪಗ್ರಸ್ತನಾಗಿ ಪುತ್ರಶೋಕದಿಂದ ಪರಿತಪಿಸುತ್ತಾ ಇಹಲೋಕ ತ್ಯಜಿಸಿದ.ಲೋಕದ ಒಡೆಯನ ತಂದೆಯಾದರೂ ದುಃಖ ತಪ್ಪಲಿಲ್ಲ,ಮನೋನಿಗ್ರಹಿಯಾದರೂ  ಕಾಮನೆಗಳನ್ನು ಬಿಡಲಿಲ್ಲ.ರಾಮಾಯಣದ ದುರಂತನಾಯಕ ದಶರಥನೆಂದರೆ ಅತಿಶಯೋಕ್ತಿಯಾಗಲಾರದು. ಕೌಸಲ್ಯೆ,ಸುಮಿತ್ರೆ,ಕೈಕೇಯಿ ದಶರಥನ ಪ್ರಸಿದ್ಧ ಪತ್ನಿಯರು.ಆದರೆ ವಾಸ್ತವದಲ್ಲಿ ದಶರಥನಿಗೆ ಹಲವು ಪತ್ನಿಯರಿದ್ದರೆಂದು ಮೂಲರಾಮಾಯಣದ ಸಂಭಾಷಣೆಗಳಿಂದ ತಿಳಿಯಬಹುದು."ರಾಜಾನೋ ಬಹುವಲ್ಲಭಾಃ" ಎಂಬುದು ಸರಿ,ಆದರೆ ಅನೇಕ ಪತ್ನಿಯರಿದ್ದರೆ ರಾಜನ ಪರಿಸ್ಥಿತಿ ಎಷ್ಟು ದಯನೀಯವಾಗಿರಬಹುದೆಂಬುದಕ್ಕೆ ದಶರಥ ಮಹಾರಾಜ ಸ್ಪಷ್ಟ ಉದಾಹರಣೆ. ವಾಲ್ಮೀಕಿರಾಮಾಯಣದ ಒಂದು ಪ್ರಸಂಗ.ಅನುಸೂಯೆಯೊಂದಿಗೆ ಮಾತಾಡುತ್ತ ಸೀತೆ,"ರಾಮ ತನ್ನ ಮಾತೆ ಕೌಸಲ್ಯೆಗೆ ಎಷ್ಟು ಗೌರವವನ್ನು ನೀಡ...

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ

ದಟ್ಟವಾದ ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವ...