Skip to main content

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ

ದಟ್ಟವಾದ ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವಾದಾಗ ನಿಧಾನವಾಗಿ ತಾನು ಹುಡುಕಿಕೊಂಡ ಸ್ಥಳದ ಕಡೆ ನಡೆಯ ತೊಡಗಿತು.

..... ನಡೆಯುತ್ತಾ ನಡೆಯುತ್ತಾ ತಾನು ಹುಡುಕಿ ಕೊಂಡ ಸ್ಥಳಕ್ಕೆ ತಲುಪಿದ ಜಿಂಕೆಗೆ ಪ್ರಸವ ವೇದನೆ ತಾಳದಾಯಿತು. ಆ ಕ್ಷಣಕ್ಕೆ ಆಕಾಶದಲ್ಲಿ ಕಾರ್ಮೋಡಗಳು ದಟ್ಟವಾಯಿತು, ಮಿಂಚಿನಿಂದ ಕಾಡಿನಲ್ಲಿ ಬೆಂಕಿ ಹತ್ತಿತು. ಇದನ್ನು ಕಂಡ ಜಿಂಕೆ ಆ ಸ್ಥಳದಿಂದ ದೂರ ಹೋಗಲು ತಿರುಗಿತು. ತಿರುಗಿದ ಜಿಂಕೆಗೆ ಆಗ ಕಂಡದ್ದು ಏನೆಂದರೆ ಅದರ ಎಡಕ್ಕೆ ಒಬ್ಬ ಬೇಟೆಗಾರ ಜಿಂಕೆಗೆ ಗುರಿ ಮಾಡಿ ಬಾಣ ಹೂಡಿದ್ದಾನೆ. ಇದನ್ನು ಕಂಡು ಆಘಾತದಿಂದ ಜಿಂಕೆ ಬಲಕ್ಕೆ ತಿರುಗಿದಾಗ ಅಲ್ಲೊಂದು ಹಸಿದ ಸಿಂಹ ಇದರೆಡೆಗೆ ಬರುತ್ತಿದೆ.

ಪ್ರಸವ ವೇದನೆ ತಾಳಲಾರದ ಜಿಂಕೆ ಈಗ ಏನು ಮಾಡೀತು !!?...
ಜಿಂಕೆ ಬದುಕುಳಿಯುತ್ತದಾ !!?...
ತನ್ನ ಮಗುವಿಗೆ ಜನ್ಮ ನೀಡುತ್ತದಾ !!?...
ಕಾಡಿನ ಬೆಂಕಿಗೆ ಎಲ್ಲರೂ ಆಹುತಿಯಾ!!?..
ಆ ಕ್ಷಣ ಏನು, ಎತ್ತ, ಹೇಗೆ !!??... 

ಜಿಂಕೆ ತನ್ನ ಎಡಕ್ಕೆ ಹೋಗುತ್ತದಾ!!?.. ಅಲ್ಲಿ ಬೇಟೆಗಾರ ಇದ್ದಾನೆ.
ಜಿಂಕೆ ತನ್ನ ಬಲಕ್ಕೆ ಹೋಗುತ್ತದಾ!!?.. ಅಲ್ಲಿ ಹಸಿದ ಸಿಂಹ ಇದೆ.
ತನ್ನ ಸ್ಥಳದಿಂದ ಮುಂದಕ್ಕೆ ಹೊರಟರೆ !!?.. ಕಾಡಿಗೆ ಬೆಂಕಿ ಬಿದ್ದಿದೆ.
ತನ್ನ ಸ್ಥಳದಿಂದ ಹಿಂದಕ್ಕೆ ಸರಿದರೆ !!?.. ಅಲ್ಲಿ ನದಿ ಇದೆ.

ಪ್ರಶ್ನೆ : ಹಾಗಾದರೆ ಈ ಕ್ಷಣಕ್ಕೆ ಗರ್ಭಿಣಿ ಜಿಂಕೆ ಏನು ಮಾಡೀತು ?...
ಉತ್ತರ : ಈ ಕ್ಷಣಕ್ಕೆ ಜಿಂಕೆ ತನ್ನ ಗಮನವೆಲ್ಲ ತನ್ನ ಮಗುವಿಗೆ ಜನ್ಮ ನೀಡುವುದರಲ್ಲಿ ಮಾತ್ರ ಕೇಂದ್ರೀಕರಿಸಿತು. She has just focussed on giving birth to a New Life , her BABY.

ತನ್ನ ಆತಂಕ, ಚಿಂತೆ, ದುಗುಡವನ್ನೆಲ್ಲಾ ಬದಿಗಿಟ್ಟು ಪರಮಾತ್ಮನಲ್ಲಿ ನಂಬಿಕೆ ಇಟ್ಟು ತನ್ನ ಕರ್ತವ್ಯ, ತನ್ನ ತಾಯಿ ಧರ್ಮವನ್ನು ಪಾಲಿಸಲು ತನ್ನ ಕುಡಿಯ ಜನನ ಕಾರ್ಯದಲ್ಲಿ ಮಗ್ನವಾಯಿತು.

ಚಿಂತೆಯನ್ನೆಲ್ಲಾ ಚಿನ್ಮಯನಿಗೆ ಕೊಟ್ಟ ಮೇಲೆ, ಜಗದೊಡೆಯ ಜಗನ್ನಾಥನ  ನಂಬಿದ ಮೇಲೆ ಎಲ್ಲವೂ ಅವನ ಭಾರ ತಾನೇ ...!!

.... ಆಗ.... ಆ .. ಒಂದು! ಕ್ಷಣದಲ್ಲಿ.... ದಟ್ಟವಾದ ಕಾರ್ಮೋಡಗಳಿಂದ ಕಣ್ಣು ಕೋರೈಸುವ ಮಿಂಚು ಹೊಡೆಯಿತು ... ಬೇಟೆಗಾರನ ಕಣ್ಣಿಗೆ ಕತ್ತಲು ಆವರಿಸಿತು... ಆತ ಹೂಡಿದ ಬಾಣ ಗುರಿ ತಪ್ಪಿ ಹಸಿದ ಸಿಂಹಕ್ಕೆ ತಗುಲಿತು... ದಟ್ಟವಾದ ಕರಿ ಮೋಡಗಳಿಂದ ಬಿರುಸಾಗಿ ಮಳೆ ಸುರಿಯ ತೊಡಗಿತು... ಮಳೆಯ ಆರ್ಭಟಕ್ಕೆ ಕಾಡಿಗೆ ಹತ್ತಿದ ಬೆಂಕಿ ಪ್ರಶಾಂತ ವಾಯಿತು ... ಆ ಕ್ಷಣಕ್ಕೆ ತಾಯಿ ಜೀವ ತನ್ನ ಮುದ್ದಾದ ಮಗುವಿಗೆ ಜನ್ಮ ನೀಡಿತು .....

ಶ್ರೀಕೃಷ್ಣ ಪರಮಾತ್ಮ ಹೇಳಿದಂತೆ ಯಾವ ಫಲದ ಅಪೇಕ್ಷೆಯೂ ಇಲ್ಲದೆ, ಯಾವ ಪರಿಣಾಮದ ಬಗ್ಗೆಯೂ ಯೋಚಿಸದೆ ತನ್ನ ತಾಯಿ ಧರ್ಮ ಪಾಲಿಸಿತು, ಗೆದ್ದಿತು. ಕಷ್ಟ ಬಂದಾಗ ನಾವು ಸಂಭವಿಸಬಹುದಾದ ಎಲ್ಲ ಸಂಭವನೀಯತೆಯನ್ನು ಯೋಚಿಸಿ ದಿಕ್ಕು ತಪ್ಪುತ್ತೇವೆ, ಹೆದರುತ್ತೇವೆ. ಮಾಡುವ ಕರ್ತವ್ಯದಿಂದ, ನಮ್ಮ ಧರ್ಮದಿಂದ ವಿಮುಖರಾಗುತ್ತೇವೆ. ಭಗವಂತನನ್ನು ನೆನೆದು, ನಮ್ಮ ಕರ್ತವ್ಯವನ್ನು ಮಾಡೋಣ, ಧರ್ಮ-ಕರ್ಮ ಗಳ ಫಲ ಎಲ್ಲ ಪರಮಾತ್ಮನ ಭಾರ !!!....

ll ಕರ್ಮಣ್ಯೇವಾಧಿಕಾರಸ್ತೇ ಮಾ
   ಫಲೇಷು ಕದಾಚನ l
   ಮಾ ಕರ್ಮಫಲಹೇತುರ್ಭೂಃ
   ಮಾ ತೇ ಸಂಗೋಸ್ತ್ವಕರ್ಮಣಿ ll

#ಧರ್ಮೋ-ರಕ್ಷತಿ-ರಕ್ಷಿತಹ

Comments

Post a Comment

Popular posts from this blog

“ಸರ್ವೇ ಜನಾಃ ಸುಖಿನೋ ಭವಂತು”

“ಸರ್ವೇ ಜನಾಃ ಸುಖಿನೋ ಭವಂತು” ಜಗತ್ತಿನಲ್ಲಿ ಎಲ್ಲರೂ ಸುಖವಾಗಿರಲಿ. ”ಲೋಕಾಃ ಸಮಸ್ತಾಃ ಸುಖಿನೋ ಭವಂತು”ಎಲ್ಲ ಲೋಕಗಳೂ ಸುಖವಾಗಿರಲಿ”ಎಂದು ಬಯಸುವ ಭವ್ಯ ಸಂಸ್ಕೃತಿ ನಮ್ಮದು. ಜಗತ್ತಿನಲ್ಲಿ ಸದಾ ಶಾಂತಿಯನ್ನು ಬಯಸಿದವರು ನಾವು.ತೀರ ಅನಿವಾರ್ಯವಾದಾಗ ಶಸ್ತ್ರವನ್ನು ಹಿಡಿದಿದ್ದೇವೆ.”ದಂಡಂ ದಶಗುಣಂ” ಎಂದು ವೈರಿಗಳ ಅಟ್ಟಹಾಸವನ್ನು ನಿಯಂತ್ರಿಸಿದ್ದೇವೆ. ಶಾಂತಿ ಹಾಗೂ ಅಹಿಂಸೆ ನಮ್ಮ ಪರಮಧರ್ಮ.”ಅಹಿಂಸಾ ಪರಮೋ ಧರ್ಮಃ” ಎಂದು ಸಾರಿದವರು ನಾವು.ಇದಕ್ಕೆ ಮೂಲಪ್ರೇರಣೆ ನಮ್ಮ ವೇದ-ಶಾಸ್ತ್ರ-ಪುರಾಣ ಮುಂತಾದ ಧರ್ಮಗ್ರಂಥಗಳಲ್ಲಿರುವ ಶಾಂತಿ ಹಾಗೂ ಅಹಿಂಸಾ ತತ್ವಗಳು.ಶಾಂತಿಮಂತ್ರಗಳು ಕೇವಲ ನಮಗಷ್ಟೇ ಅಲ್ಲ,ಇಡೀ ಪ್ರಪಂಚ ಶಾಂತವಾಗಿರಲೆಂದು ಆಶಿಸುತ್ತವೆ. ಕೇವಲ ಮನುಷ್ಯನಷ್ಟೇ ಶಾಂತವಾಗಿದ್ದರೆ ಸಾಲದು.ಪರಮಾತ್ಮ,ಪ್ರಕೃತಿ,ವನೌಷಧಿ ಹೀಗೆ ಎಲ್ಲವೂ ಸದಾ ಶಾಂತವಾಗಿರಲೆಂದು ಶಾಂತಿಮಂತ್ರಗಳು ಬಯಸುತ್ತವೆ. ಅಂತಹ ಶಾಂತಿಮಂತ್ರಗಳ ಕಿರು ಪರಿಚಯವನ್ನು ಮಾಡಿಕೊಳ್ಳೋಣ.. ಓಂ ನಮೋ ಬ್ರಹ್ಮಣೇ ನಮೋ ಅಸ್ತ್ವಗ್ನಯೇ ನಮಃ ಪೃಥಿವ್ಯೈ ನಮ ಓಷಧೀಭ್ಯಃ | ನಮೋ ವಾಚೇ ನಮೋ ವಾಚಸ್ಪತಯೇ ನಮೋ ವಿಷ್ಣವೇ ಬೃಹತೇ ಕರೋಮಿ || ಓಂ ಶಾಂತಿಃ ಶಾಂತಿಃ ಶಾಂತಿಃ ಬ್ರಹ್ಮನಿಗೆ ನಮಸ್ಕಾರ,ಅಗ್ನಿಗೆ ನಮಸ್ಕಾರ,ಸಸ್ಯಗಳಿಗೆ ನಮಸ್ಕಾರ,ಮಾತಿಗೆ ನಮಸ್ಕಾರ,ಮಾತಿನ ಒಡೆಯನಿಗೆ ನಮಸ್ಕಾರ,ಸರ್ವಾಂತರ್ಯಾಮಿ ಹಾಗೂ ಸಮರ್ಥನಾದ ವಿಷ್ಣುವಿಗೆ ನಮಸ್ಕಾರ. ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸಹನಾವವತ...

ದಶರಥ

ಇಕ್ಷ್ವಾಕುವಂಶದ ಪ್ರಸಿದ್ಧ ರಾಜ ದಶರಥ.ವಾಲ್ಮೀಕಿರಾಮಾಯಣದ ನಾಯಕ,ಮರ್ಯಾದಾಪುರುಷೋತ್ತಮ,ಪ್ರಾತಃಸ್ಮರಣೀಯ ಶ್ರೀರಾಮಚಂದ್ರನ ತಂದೆ.ದಶರಥನ ಹೆಸರಿನಿಂದಲೇ ರಾಮ "ದಾಶರಥಿರಾಮ" ಎಂದು ವಿಖ್ಯಾತನಾದ.ಅಜಮಹಾರಾಜನ ಪುತ್ರ ದಶರಥ,ಆತನ ತಾಯಿಯ ಹೆಸರು ಇಂದುಮತಿ. ಧೀರತೆಗೆ,ಧರ್ಮನಿಷ್ಟೆಗೆ ಹೆಸರಾಗಿದ್ದ ಅಯೋಧ್ಯೆಯ ರಾಜ ದಶರಥ.ಆದರೆ ಅತಿಯಾದ ವಿಷಯಾಸಕ್ತಿಗಳಿಂದ ಬದುಕನ್ನೇ ಅನರ್ಥ ಮಾಡಿಕೊಂಡ.ಭಾರ್ಗವರಿಂದ ಕಾಡಿ-ಬೇಡಿ ಕಲಿತಿದ್ದ ಶಬ್ದವೇಧಿ ವಿದ್ಯೆಯನ್ನು ಪರೀಕ್ಷಿಸಲು ಹೋಗಿ,ಅನ್ಯಾಯವಾಗಿ ಶ್ರವಣಕುಮಾರನನ್ನು ಕೊಂದು ಆತನ ಪಾಲಕರಿಂದ ಶಾಪಗ್ರಸ್ತನಾಗಿ ಪುತ್ರಶೋಕದಿಂದ ಪರಿತಪಿಸುತ್ತಾ ಇಹಲೋಕ ತ್ಯಜಿಸಿದ.ಲೋಕದ ಒಡೆಯನ ತಂದೆಯಾದರೂ ದುಃಖ ತಪ್ಪಲಿಲ್ಲ,ಮನೋನಿಗ್ರಹಿಯಾದರೂ  ಕಾಮನೆಗಳನ್ನು ಬಿಡಲಿಲ್ಲ.ರಾಮಾಯಣದ ದುರಂತನಾಯಕ ದಶರಥನೆಂದರೆ ಅತಿಶಯೋಕ್ತಿಯಾಗಲಾರದು. ಕೌಸಲ್ಯೆ,ಸುಮಿತ್ರೆ,ಕೈಕೇಯಿ ದಶರಥನ ಪ್ರಸಿದ್ಧ ಪತ್ನಿಯರು.ಆದರೆ ವಾಸ್ತವದಲ್ಲಿ ದಶರಥನಿಗೆ ಹಲವು ಪತ್ನಿಯರಿದ್ದರೆಂದು ಮೂಲರಾಮಾಯಣದ ಸಂಭಾಷಣೆಗಳಿಂದ ತಿಳಿಯಬಹುದು."ರಾಜಾನೋ ಬಹುವಲ್ಲಭಾಃ" ಎಂಬುದು ಸರಿ,ಆದರೆ ಅನೇಕ ಪತ್ನಿಯರಿದ್ದರೆ ರಾಜನ ಪರಿಸ್ಥಿತಿ ಎಷ್ಟು ದಯನೀಯವಾಗಿರಬಹುದೆಂಬುದಕ್ಕೆ ದಶರಥ ಮಹಾರಾಜ ಸ್ಪಷ್ಟ ಉದಾಹರಣೆ. ವಾಲ್ಮೀಕಿರಾಮಾಯಣದ ಒಂದು ಪ್ರಸಂಗ.ಅನುಸೂಯೆಯೊಂದಿಗೆ ಮಾತಾಡುತ್ತ ಸೀತೆ,"ರಾಮ ತನ್ನ ಮಾತೆ ಕೌಸಲ್ಯೆಗೆ ಎಷ್ಟು ಗೌರವವನ್ನು ನೀಡ...