Skip to main content

ದೇವಸ್ಥಾನಕ್ಕೆ ಹೋಗ ಬೇಕೆ ?

ದೇವಸ್ಥಾನಗಳಿಗೆ ಹೆಚ್ಚೆಚ್ಚು ಹೋಗುವುದರಿಂದ ಆರೋಗ್ಯ
ವರ್ಧಿಸುತ್ತದೆ...!!!
ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟ ವಿಷಯ..
ಗೆಳೆಯರೇ..
ನಿಜಕ್ಕೂ ಅಚ್ಚರಿಯಾಗಬಹುದು... ದೇವಸ್ಥಾನಗಳಿಗೆ
ಹೋಗುವುದನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಿ..
ಇದರಿಂದ ನಿಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ
ವೃದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ..
ದೇವಸ್ಥಾನಗಳನ್ನು ಕಟ್ಟಿದ ಜಾಗಗಳಲ್ಲಿ ಅಯಸ್ಕಾಂತೀಯ
ತರಂಗಗಳು (Magnetic Waves) ಸದಾ ಪ್ರವಹಿಸುತ್ತಲೇ
ಇರುತ್ತವೆ... ಹೇಗೆ ಗೊತ್ತೇ...?? ದೇವರ ಮೂಲಸ್ಥಾನ
ಗರ್ಭಗುಡಿ... ಆ ಗರ್ಭಗುಡಿಗೆ ಅಥವಾ ಮೇಲ್ಛಾವಣಿಗೆ
ಹೊದೆಸಿರುವ ತಾಮ್ರದ ಹೊದಿಕೆಗಳನ್ನು ನೀವು
ನೋಡಿರಬಹುದು... ಆ ತಾಮ್ರದ ಹೊದಿಕೆಗಳಲ್ಲೇ ಸದಾ
ಸಕಾರಾತ್ಮಕ ಶಕ್ತಿ (Positive energy) ಪ್ರವಹಿಸುತ್ತಲೇ
ಇರುತ್ತದೆ... ನಾವು ದೇವಸ್ಥಾನಕ್ಕೆ ಅಥವಾ ದೇವಸ್ಥಾನದ
ಪ್ರದಕ್ಷಿಣೆ ಹಾಕುವಾಗ ಈ ಶಕ್ತಿ ನಮ್ಮ ಶರೀರದಲ್ಲೂ
ಪ್ರವಹಿಸುತ್ತದೆ... ದೇವಸ್ಥಾನದಲ್ಲಿ ಜಾಸ್ತಿ ಹೊತ್ತು ಕುಳಿತು
ಜಪ ಅಥವಾ ಧ್ಯಾನ ಮಾಡುವುದರಿಂದ ದೇಹದ ಆಯಾಸ
ಕಡಿಮೆಯಾಗಿರುವುದು ನಿಮ್ಮ ಗಮನಕ್ಕೂ ಬಂದಿರಬಹುದು...
ಅದಕ್ಕೆ ಕಾರಣ ಇದೇ Positive energy. ದೇವಸ್ಥಾನದಲ್ಲಿನ
ಶಾಂತತೆಯಿಂದ ನಮ್ಮ ಮನಸ್ಸೂ ಪ್ರಶಾಂತವಾಗುತ್ತದೆ
ಎಂಬುದಕ್ಕೆ ಯಾವುದೇ ಅನುಮಾನವಿಲ್ಲ.
ಇನ್ನೂ ಇದೆ... ಪವಿತ್ರವಾದ ಗರ್ಭಗೃಹ ಮೂರೂ ಕಡೆಯಿಂದ
ಮುಚ್ಚಲಾಗಿರುತ್ತದೆ... ಮುಖ್ಯದ್ವಾರವೊಂದೇ
ತೆರೆದಿರುತ್ತದೆ... ಗರ್ಭಗುಡಿಯಲ್ಲಿ ಪ್ರವಹಿಸುವ ಅಯಸ್ಕಾಂತೀಯ
ತರಂಗಗಳು (Magnetic Waves) ಮುಖ್ಯದ್ವಾರದ ಮೂಲಕ
ಜೋರಾಗಿ ಚಿಮ್ಮುತ್ತದೆ... ಆದ್ದರಿಂದ ಮುಖ್ಯದ್ವಾರದ
ಮುಂದೆ ನಿಂತಷ್ಟೂ ನಮಗೆ ಸಮಾಧಾನವಾಗುತ್ತದೆ... ಒಂದೆಡೆ
ದೇವರ ದರ್ಶನ , ಇನ್ನೊಂದೆಡೆ ಆಯಾಸ ಪರಿಹಾರ... ಹೇಗಿದೆ
ನೋಡಿ..!!
ಹಾಗೇ ದೀಪಗಳಿಂದ ಬೆಳಕಿನ ಶಕ್ತಿ (Light energy),
ಘಂಟಾನಾದದಿಂದ ಹಾಗೂ ಮಂತ್ರಘೋಷಗಳಿಂದ ಶಬ್ದ ಶಕ್ತಿ
(Sound Energy), ಹೂಗಳ ಪರಿಮಳದಿಂದ, ಕರ್ಪೂರದ
ಸುವಾಸನೆಯಿಂದ ರಾಸಾಯನಿಕ ಶಕ್ತಿ (Chemical Energy),
ಇವೆಲ್ಲಕ್ಕಿಂತಲೂ ಪ್ರಮುಖವಾದದ್ದು ದೇವರ ಪ್ರತಿಮೆಯಿಂದ
ಹಾಗೂ ಗರ್ಭಗುಡಿಯಲ್ಲಿ ಇಟ್ಟಿರುವ ತಾಮ್ರದ ಹರಿವಾಣ,
ತಾಮ್ರದ ಪೂಜಾಸಾಮಗ್ರಿಗಳಿಂದ ಬರುವ, ಉತ್ತರ ದಕ್ಷಿಣ
ಧೃವಗಳಿಂದ (South north pole) ಪ್ರವಹಿಸುವ ಸಕಾರಾತ್ಮಕ
ಶಕ್ತಿ..!!
ಇನ್ನು ತೀರ್ಥಸೇವನೆ...
ತೀರ್ಥವನ್ನು ಮಾಡುವುದು ಹೇಗೆ...???
ಯಾಲಕ್ಕಿ , ತುಳಸಿ , ಲವಂಗ ಮುಂತಾದವುಗಳಿಂದ...
ಇವುಗಳನ್ನು ನೀರಿಗೆ ಹಾಕುವುದರಿಂದ ನೀರಿನಲ್ಲಿಯೂ
ಸಕಾರಾತ್ಮಕ ಶಕ್ತಿಯ ಉದ್ಭವವಾಗುತ್ತದೆ...
ತೀರ್ಥಸೇವನೆಯಿಂದ ದೇಹ ಆಹ್ಲಾದವಾಗುತ್ತದೆ... ಚೈತನ್ಯ
ಮೂಡುತ್ತದೆ... ಆರೋಗ್ಯಕರವೂ ಹೌದು... ಹೇಗೆಂದರೆ, ಲವಂಗ
ನಮ್ಮ ಹಲ್ಲುಗಳ ಆರೋಗ್ಯವನ್ನು ವರ್ಧಿಸುತ್ತದೆ, ತುಳಸಿ ನೆಗಡಿ,
ಕೆಮ್ಮು, ಬರದಂತೇ ತಡೆಯುತ್ತದೆ, ಯಾಲಕ್ಕಿ ಅಥವಾ
ಪಂಚಕರ್ಪೂರ ಬಾಯಿಯನ್ನು ಶುದ್ಧವಾಗಿಸುತ್ತದೆ... ಇನ್ನೂ
ಅನೇಕ ಔಷದೀಯ ಗುಣಗಳು ತೀರ್ಥದಲ್ಲಿರುತ್ತವೆ...
ದೀಪಾರಾಧನೆ, ವಿಶೇಷಪೂಜೆಗಳ ದಿನಗಳಲ್ಲಿ ದೇವಾಲಯಗಳಲ್ಲಿ
ಹೆಚ್ಚು - ಹೆಚ್ಚು ಸಕಾರಾತ್ಮಕಶಕ್ತಿಯ ಸಂಚಾರವಾಗುತ್ತಿರು
ತ್ತದೆ...
ಇನ್ನು ದೇವಸ್ಥಾನಗಳಲ್ಲಿ ಶುದ್ಧಿಗಾಗಿ ನೀರನ್ನು ದೇಹದ
ಮೇಲೆ ಚಿಮುಕಿಸುತ್ತಿರುವುದನ್ನು ನೋಡಿರಬಹುದು...
ಇದರಿಂದ ನಮ್ಮ ಶರೀರದ ಶುದ್ಧಿ ಹಾಗೂ ಆಯಾಸದ
ನಿವಾರಣೆಯಾಗುತ್ತದೆ... ಆ ಕಾರಣದಿಂದಲೇ ಪುರುಷರು
ದೇವಸ್ಥಾನಕ್ಕೆ ಹೋಗುವಾಗ ಅಂಗಿಯನ್ನು ಕಳಚಿಟ್ಟು
ಹೋಗುವುದು ಒಳ್ಳೆಯದು... ಮಹಿಳೆಯರು ಜಾಸ್ತಿ ಒಡವೆಗಳನ್ನು
ಹಾಕಿಕೊಂಡು ಹೋಗುವುದು ಒಳ್ಳೆಯದು... ಏಕೆಂದರೆ
ಲೋಹಗಳಿಂದ ಶಕ್ತಿಯ ಸಂಚಾರ ದೇಹದಲ್ಲಾಗುತ್ತದೆ..
ಸಾಕಲ್ಲವೇ ಇಷ್ಟು ವೈಜ್ಞಾನಿಕ ಆಧಾರ...??

ಆದ್ದರಿಂದ ಸ್ನೇಹಿತರೇ ದೇವಸ್ಥಾನಗಳಿಗೆ ಹೆಚ್ಚೆಚ್ಚು ಭೇಟಿ
ನೀಡಿ...

ಹಿಂದೂ ಸಂಸ್ಕ್ರತಿಯಲ್ಲಿ ಪ್ರತಿಯೊಂದಕ್ಕೂ ಕಾರಣ ಇದೆ ಸ್ನೇಹಿತರೇ....ನಮ್ಮ ಸಂಸ್ಕೃತಿ ಮರೆಯಬೇಡಿ

Comments

Popular posts from this blog

“ಸರ್ವೇ ಜನಾಃ ಸುಖಿನೋ ಭವಂತು”

“ಸರ್ವೇ ಜನಾಃ ಸುಖಿನೋ ಭವಂತು” ಜಗತ್ತಿನಲ್ಲಿ ಎಲ್ಲರೂ ಸುಖವಾಗಿರಲಿ. ”ಲೋಕಾಃ ಸಮಸ್ತಾಃ ಸುಖಿನೋ ಭವಂತು”ಎಲ್ಲ ಲೋಕಗಳೂ ಸುಖವಾಗಿರಲಿ”ಎಂದು ಬಯಸುವ ಭವ್ಯ ಸಂಸ್ಕೃತಿ ನಮ್ಮದು. ಜಗತ್ತಿನಲ್ಲಿ ಸದಾ ಶಾಂತಿಯನ್ನು ಬಯಸಿದವರು ನಾವು.ತೀರ ಅನಿವಾರ್ಯವಾದಾಗ ಶಸ್ತ್ರವನ್ನು ಹಿಡಿದಿದ್ದೇವೆ.”ದಂಡಂ ದಶಗುಣಂ” ಎಂದು ವೈರಿಗಳ ಅಟ್ಟಹಾಸವನ್ನು ನಿಯಂತ್ರಿಸಿದ್ದೇವೆ. ಶಾಂತಿ ಹಾಗೂ ಅಹಿಂಸೆ ನಮ್ಮ ಪರಮಧರ್ಮ.”ಅಹಿಂಸಾ ಪರಮೋ ಧರ್ಮಃ” ಎಂದು ಸಾರಿದವರು ನಾವು.ಇದಕ್ಕೆ ಮೂಲಪ್ರೇರಣೆ ನಮ್ಮ ವೇದ-ಶಾಸ್ತ್ರ-ಪುರಾಣ ಮುಂತಾದ ಧರ್ಮಗ್ರಂಥಗಳಲ್ಲಿರುವ ಶಾಂತಿ ಹಾಗೂ ಅಹಿಂಸಾ ತತ್ವಗಳು.ಶಾಂತಿಮಂತ್ರಗಳು ಕೇವಲ ನಮಗಷ್ಟೇ ಅಲ್ಲ,ಇಡೀ ಪ್ರಪಂಚ ಶಾಂತವಾಗಿರಲೆಂದು ಆಶಿಸುತ್ತವೆ. ಕೇವಲ ಮನುಷ್ಯನಷ್ಟೇ ಶಾಂತವಾಗಿದ್ದರೆ ಸಾಲದು.ಪರಮಾತ್ಮ,ಪ್ರಕೃತಿ,ವನೌಷಧಿ ಹೀಗೆ ಎಲ್ಲವೂ ಸದಾ ಶಾಂತವಾಗಿರಲೆಂದು ಶಾಂತಿಮಂತ್ರಗಳು ಬಯಸುತ್ತವೆ. ಅಂತಹ ಶಾಂತಿಮಂತ್ರಗಳ ಕಿರು ಪರಿಚಯವನ್ನು ಮಾಡಿಕೊಳ್ಳೋಣ.. ಓಂ ನಮೋ ಬ್ರಹ್ಮಣೇ ನಮೋ ಅಸ್ತ್ವಗ್ನಯೇ ನಮಃ ಪೃಥಿವ್ಯೈ ನಮ ಓಷಧೀಭ್ಯಃ | ನಮೋ ವಾಚೇ ನಮೋ ವಾಚಸ್ಪತಯೇ ನಮೋ ವಿಷ್ಣವೇ ಬೃಹತೇ ಕರೋಮಿ || ಓಂ ಶಾಂತಿಃ ಶಾಂತಿಃ ಶಾಂತಿಃ ಬ್ರಹ್ಮನಿಗೆ ನಮಸ್ಕಾರ,ಅಗ್ನಿಗೆ ನಮಸ್ಕಾರ,ಸಸ್ಯಗಳಿಗೆ ನಮಸ್ಕಾರ,ಮಾತಿಗೆ ನಮಸ್ಕಾರ,ಮಾತಿನ ಒಡೆಯನಿಗೆ ನಮಸ್ಕಾರ,ಸರ್ವಾಂತರ್ಯಾಮಿ ಹಾಗೂ ಸಮರ್ಥನಾದ ವಿಷ್ಣುವಿಗೆ ನಮಸ್ಕಾರ. ಓಂ ಶಾಂತಿಃ ಶಾಂತಿಃ ಶಾಂತಿಃ ಓಂ ಸಹನಾವವತ...

ದಶರಥ

ಇಕ್ಷ್ವಾಕುವಂಶದ ಪ್ರಸಿದ್ಧ ರಾಜ ದಶರಥ.ವಾಲ್ಮೀಕಿರಾಮಾಯಣದ ನಾಯಕ,ಮರ್ಯಾದಾಪುರುಷೋತ್ತಮ,ಪ್ರಾತಃಸ್ಮರಣೀಯ ಶ್ರೀರಾಮಚಂದ್ರನ ತಂದೆ.ದಶರಥನ ಹೆಸರಿನಿಂದಲೇ ರಾಮ "ದಾಶರಥಿರಾಮ" ಎಂದು ವಿಖ್ಯಾತನಾದ.ಅಜಮಹಾರಾಜನ ಪುತ್ರ ದಶರಥ,ಆತನ ತಾಯಿಯ ಹೆಸರು ಇಂದುಮತಿ. ಧೀರತೆಗೆ,ಧರ್ಮನಿಷ್ಟೆಗೆ ಹೆಸರಾಗಿದ್ದ ಅಯೋಧ್ಯೆಯ ರಾಜ ದಶರಥ.ಆದರೆ ಅತಿಯಾದ ವಿಷಯಾಸಕ್ತಿಗಳಿಂದ ಬದುಕನ್ನೇ ಅನರ್ಥ ಮಾಡಿಕೊಂಡ.ಭಾರ್ಗವರಿಂದ ಕಾಡಿ-ಬೇಡಿ ಕಲಿತಿದ್ದ ಶಬ್ದವೇಧಿ ವಿದ್ಯೆಯನ್ನು ಪರೀಕ್ಷಿಸಲು ಹೋಗಿ,ಅನ್ಯಾಯವಾಗಿ ಶ್ರವಣಕುಮಾರನನ್ನು ಕೊಂದು ಆತನ ಪಾಲಕರಿಂದ ಶಾಪಗ್ರಸ್ತನಾಗಿ ಪುತ್ರಶೋಕದಿಂದ ಪರಿತಪಿಸುತ್ತಾ ಇಹಲೋಕ ತ್ಯಜಿಸಿದ.ಲೋಕದ ಒಡೆಯನ ತಂದೆಯಾದರೂ ದುಃಖ ತಪ್ಪಲಿಲ್ಲ,ಮನೋನಿಗ್ರಹಿಯಾದರೂ  ಕಾಮನೆಗಳನ್ನು ಬಿಡಲಿಲ್ಲ.ರಾಮಾಯಣದ ದುರಂತನಾಯಕ ದಶರಥನೆಂದರೆ ಅತಿಶಯೋಕ್ತಿಯಾಗಲಾರದು. ಕೌಸಲ್ಯೆ,ಸುಮಿತ್ರೆ,ಕೈಕೇಯಿ ದಶರಥನ ಪ್ರಸಿದ್ಧ ಪತ್ನಿಯರು.ಆದರೆ ವಾಸ್ತವದಲ್ಲಿ ದಶರಥನಿಗೆ ಹಲವು ಪತ್ನಿಯರಿದ್ದರೆಂದು ಮೂಲರಾಮಾಯಣದ ಸಂಭಾಷಣೆಗಳಿಂದ ತಿಳಿಯಬಹುದು."ರಾಜಾನೋ ಬಹುವಲ್ಲಭಾಃ" ಎಂಬುದು ಸರಿ,ಆದರೆ ಅನೇಕ ಪತ್ನಿಯರಿದ್ದರೆ ರಾಜನ ಪರಿಸ್ಥಿತಿ ಎಷ್ಟು ದಯನೀಯವಾಗಿರಬಹುದೆಂಬುದಕ್ಕೆ ದಶರಥ ಮಹಾರಾಜ ಸ್ಪಷ್ಟ ಉದಾಹರಣೆ. ವಾಲ್ಮೀಕಿರಾಮಾಯಣದ ಒಂದು ಪ್ರಸಂಗ.ಅನುಸೂಯೆಯೊಂದಿಗೆ ಮಾತಾಡುತ್ತ ಸೀತೆ,"ರಾಮ ತನ್ನ ಮಾತೆ ಕೌಸಲ್ಯೆಗೆ ಎಷ್ಟು ಗೌರವವನ್ನು ನೀಡ...

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ

ದಟ್ಟವಾದ ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವ...